ಭಾರತಕ್ಕೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರಿಗೆ ‘ವಿಹಿಂಪ’ ಒತ್ತಾಯ

12:40 PM, Thursday, September 28th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

vhpಮಂಗಳೂರು :  ರೋಹಿಂಗ್ಯಾ ಮುಸ್ಲಿಮರನ್ನು ಈ ಕೂಡಲೇ ಗಡಿಪಾರು ಮಾಡಬೇಕೆಂದು ವಿಶ್ವ ಹಿಂದು ಪರಿಷತ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮಂಗಳೂರಿನಲ್ಲಿ ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, “ಮಯಾನ್ಮಾರ್ ನಿಂದ ಭಾರತಕ್ಕೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರು ಭಾರತದ ಆಂತರಿಕ ಭದ್ರತೆಗೆ ಭಂಗ ತರುವ ಸಾಧ್ಯತೆ ಇದೆ,” ಎಂದು ಆತಂಕ ವ್ಯಕ್ತಪಡಿಸಿದರು .

“ಮಯಾನ್ಮಾರ್ ನ ಹಿಂಸಾ ಪೀಡಿತ ರಖಿನೆ ಪ್ರಾಂತ್ಯದಲ್ಲಿ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳ ಸಾಮೂಹಿಕ ಹತ್ಯೆ ಮಾಡಿರುವುದು ಈಗಾಗಲೇ ಬಯಲಾಗಿದೆ. ಈ ಮೂಲಕ ಮುಗ್ಧರೆಂದು ಹೇಳಲಾಗುವ ರೋಹಿಂಗ್ಯಾ ಮುಸ್ಲಿಮರ ಬರ್ಬರತೆ ಬೆಳಕಿಗೆ ಬಂದಿದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳು ಮತ್ತು ಬೌದ್ಧರನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರಕ್ಕೆ ಪ್ರತಿಯಾಗಿ ನಡೆಸಿದ ದಾಳಿಗೆ ಸಾವಿರಾರು ರೋಹಿಂಗ್ಯಾ ಭಯೋತ್ಪಾದಕರು ಭಾರತಕ್ಕೆ ನುಸುಳಿದ್ದಾರೆ . ಇಂತಹ ತೀವ್ರವಾದಿ ಮಾನಸಿಕತೆ ಇರುವ ರೋಹಿಂಗ್ಯಾ ಮುಸ್ಲಿಮರಿಗೆ ಭಾರತ ಆಶ್ರಯ ನೀಡಿದೆ. ಇವರನ್ನು ಈ ಕೂಡಲೇ ಗಡಿಪಾರು ಮಾಡಬೇಕೆಂದು ಅವರು ಒತ್ತಾಯಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English