- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕುದ್ರೋಳಿಯಲ್ಲಿ ಸ್ವಾಗತಿಸಿದ ಜನಾರ್ದನ ಪೂಜಾರಿ

poojaryBhat [1]ಮಂಗಳೂರು : ಕಳೆದ ಐದಾರು ವರ್ಷಗಳಿಂದ ನಿರಂತರವಾಗಿ ನವರಾತ್ರಿ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ಡಾ ಕಲ್ಲಡ್ಕ ಪ್ರಭಾಕರ ಭಟ್ ಬೇಟಿ ನೀಡುತ್ತಾ ಬಂದಿದ್ದಾರೆ ಅಂತೆಯೇ  ಈ ಬಾರಿಯೂ ಭಾಗಿಯಾಗಿದ್ದರು. ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು, ಕಾಂಗ್ರೆಸ್ ಸರ್ಕಾರದಿಂದ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ ಘಟನೆ ನಡೆಯಿತು.

ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪತ್ನಿ ಸಮೇತರಾಗಿ ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿದರು.

ಸುಮಾರು ಇಪ್ಪತ್ತಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಕಲ್ಲಡ್ಕ ಪ್ರಭಾಕರ ಭಟ್ ಕ್ಷೇತ್ರಕ್ಕೆ ಭೇಟಿ ನೀಡಿ ಶಾರದಾ ಮಾತೆ ಸೇರಿದಂತೆ ನವ ದುರ್ಗೆಯರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪತ್ನಿ ಡಾ.ಕಮಲಾ ಭಟ್ ಜತೆಗೆ ಗುರುವಾರ ಸಂಜೆ ಕ್ಷೇತ್ರಕ್ಕೆ ಭೇಟಿ ಮಾಡಿದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿದರು. ಇದೇ ವೇಳೆ ಕ್ಷೇತ್ರದಲ್ಲೇ ಇದ್ದ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರನ್ನೂ ಭೇಟಿಯಾಗಿ ಕುಶಲ ವಿಚಾರಿಸಿದರು.