ಯಕ್ಷಗಾನ ಲೋಕದ ದಿಗ್ಗಜ ಚಿಟ್ಟಾಣಿ ಅವರ ಅಂತಿಮ ಯಾತ್ರೆ, ಅಂತಿಮ ದರ್ಶನ

1:13 PM, Wednesday, October 4th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

chittani RHಉಡುಪಿ : ಮಣಿಪಾಲ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ ಯಕ್ಷಗಾನ ಲೋಕದ ದಿಗ್ಗಜ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಅಂತಿಮ ಯಾತ್ರೆ  ನಡೆಸಲಾಗುತ್ತಿದ್ದು, ಇಂದು ಸಂಜೆ ಸ್ವಗೃಹ ಹೊನ್ನಾವರದ ಗುಡ್ಡೆಕೇರಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರಗಳು ನಡೆಯಲಿವೆ. ಬೆಳಗ್ಗೆ 8.30 ರ ವರಗೆ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಶಾಸಕ ರಘುಪತಿ ಭಟ್‌, ಯಕ್ಷಗಾನ ಮೇಳಗಳ ಯಜಮಾನ ಕಿಶನ್‌ ಹೆಗ್ಡೆ ಸೇರಿದಂತೆ ನೂರಾರು ಗಣ್ಯರು ,ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

chittani RHವಿಶೇಷ ವಾಹನದಲ್ಲಿ ಹೆದ್ದಾರಿಯಲ್ಲಿ ಹೊನ್ನಾವರಕ್ಕೆ ಪಾರ್ಥೀವ ಶರೀರದ ಯಾತ್ರೆ ನಡೆಸಲಾಗುತ್ತಿದೆ. ಪುತ್ರ,ಪ್ರಸಿದ್ಧ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಜೊತೆಯಲ್ಲಿದ್ದಾರೆ. ಕೋಟದಲ್ಲಿ ಸಾರ್ವಜನಿಕ ರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ನೂರಾರು ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.

chittani RHಮುರ್ಡೇಶ್ವರದಲ್ಲೂ ಸ್ವಾಗತ ಗೋಪುರದ ಬಳಿ ಮಧ್ಯಾಹ್ನ 12.30 ರ ವೇಳೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English