ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ಪರಿಹಾರ ಘೋಷಣೆ :ರಾಜ್ಯ ಸರ್ಕಾರ

4:40 PM, Saturday, October 14th, 2017
Share
1 Star2 Stars3 Stars4 Stars5 Stars
(No Ratings Yet)
Loading...

Vasudeva bhatಬೆಂಗಳೂರು: ಶುಕ್ರವಾರ ಸುರಿದ ಭಾರಿ ಮಳೆಯಲ್ಲಿ ನೀರುಪಾಲಾಗಿದ್ದ ಅರ್ಚಕ ವಾಸುದೇವ ಭಟ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಶನಿವಾರ ಪರಿಹಾರ ಘೋಷಣೆ ಮಾಡಿದೆ.ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಅರ್ಚಕ್ ವಾಸುದೇವ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ವಾಸುದೇವ್ ಅವರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಘಟನೆ ನಡೆದಿದ್ದ ಕುರುಬರ ಹಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಳೆ ಸಂತ್ರಸ್ಥ ಕುಟುಂಬಸ್ಥರನ್ನು ಭೇಟಿಯಾದರು. ಈ ವೇಳೆ ಅರ್ಚಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ, ರಾತ್ರಿ ಮಳೆಗೆ ಜೀವ ತೆತ್ತವರ ಬಗ್ಗೆ ಬಹಳ ದುಃಖವಾಗಿದೆ. ಎಲ್ಲ ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದರು. ಅಂತೆಯೇ ಸಾವಿನ ಸಂದರ್ಭದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದ ಸಿದ್ದರಾಮಯ್ಯ ಕೇವಲ ರಾಜಕೀಯ ಕಾರಣಕ್ಕೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಾರಿ ಹೆಚ್ಚು ಮಳೆ ಬಂದಿರುವುದೇ ಅನಾಹುತಕ್ಕೆ ಕಾರಣ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಿಡುವಿಲ್ಲದೇ ಮಳೆ ಸುರಿಯುತ್ತಿರುವ ಕಾರಣ ರಾಜಕಾಲುವೆಯ ಹೂಳು ತೆಗೆಯಲೂ ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English