ಸಿಐಟಿಯು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಧರಣಿ

4:08 PM, Wednesday, October 25th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

CITUಮಂಗಳೂರು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿಯ ಮುಂಭಾಗ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಬುಧವಾರ ಧರಣಿ ನಡೆಯಿತು.

ಕರ್ನಾಟಕ ಕಾರ್ಮಿಕರಿಗೆ ಕನಿಷ್ಠ ಕೂಲಿ 18 ಸವಾರ ರೂ. ನೀಡಲು ಒತ್ತಾಯಿಸಿ, ಗುತ್ತಿಗೆ ಪದ್ಧತಿ ನಿಷೇದಕ್ಕಾಗಿ, ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಲು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಯಿತು.

ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಯು ಟಿ ಲೋಕಯ್ಯ, ಸದಾಶಿವದಾಸ್, ಬಾಬು ದೇವಾಡಿಗ ಜಯಂತಿ ಶೆಟ್ಟಿ, ಭಾರತಿ ಬೋಳಾರ್ , ಲೋಲಾಕ್ಷಿ ಹಾಗೂ ಇತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English