- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪೊಲೀಸ್ ಸಿಬ್ಬಂದಿಗೆ ಬೈಕ್ ಡಿಕ್ಕಿ, ರೌಡಿಶೀಟರ್‌ ಬಂಧನ

abdul muneer [1]ಮಂಗಳೂರು: ಸಿಸಿಬಿ ಪೊಲೀಸರು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರೌಡಿಶೀಟರ್‌ನನ್ನು ಬಂಧಿಸಿದ್ದಾರೆ.

ಬಜಪೆಯ ಶಾಂತಿಗುಡ್ಡೆಯ ನಿವಾಸಿ ಅಬ್ದುಲ್ ಮುನೀರ್ (22) ಬಂಧಿತ ಆರೋಪಿ. ಈತ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಜಂಕ್ಷನ್ ಬಳಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಳಿಸಿದ್ದ ಎನ್ನಲಾಗಿದೆ.

22-10-2017 ರಂದು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಯ ಭೇಟಿಯ ಹಿನ್ನೆಲೆ ಮಂಗಳೂರು ನಗರ ಸಂಚಾರ ಉತ್ತರ ಉಪವಿಭಾಗದ ಪೊಲೀಸ್ ನಿರೀಕ್ಷಕ ಮಂಜುನಾಥ್‌ ಅವರು ಸಿಬ್ಬಂದಿ ಜೊತೆ ಮಂಗಳೂರು ನಗರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದರು.

ಈ ಸಂದರ್ಭದಲ್ಲಿ ಬಜಪೆ ಕಡೆಯಿಂದ ಕಾವೂರು ಕಡೆಗೆ ಬೈಕ್‌ನಲ್ಲಿ ಹೆಲ್ಮೆಟ್ ಧರಿಸದೇ ಬರುತ್ತಿದ್ದ ಹಿನ್ನೆಲೆ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಚೆಲುವರಾಜ್ ಬೈಕ್ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಈ ವೇಳೆ ಬೈಕ್ ಸವಾರ ಬೈಕ್‌ನ್ನು ಏಕಾಎಕಿ ಪೊಲೀಸ್ ಸಿಬ್ಬಂದಿವರಾದ ಚೆಲುವರಾಜ್ ಎಂಬುವರಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿ ಬೈಕ್‌ನೊಂದಿಗೆ ಪರಾರಿಯಾಗಿದ್ದ.

ಈ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಆರೋಪಿ ಅಬ್ದುಲ್ ಮುನೀರ್‌‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಈಗಾಗಲೇ ರೌಡಿಶೀಟರ್‌ ಆಗಿದ್ದು 10 ಪ್ರಕರಣಗಳು ಈತನ ಮೇಲಿವೆ ಎಂದು ತಿಳಿದುಬಂದಿದೆ.