- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಹಿಂದೂಗಳು ಸಹಿಸಲು ಸಾಧ್ಯವಿಲ್ಲ: ಕಟೀಲ್‌

nalin kumar kateel [1]ಮಂಗಳೂರು:ಸ್ವಾಭಿಮಾನಿ ಹಿಂದೂಗಳು, ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು  ಸಹಿಸಲು ಸಾಧ್ಯವಿಲ್ಲ ಎಂದು ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಇಂತಹ ಮತಾಂಧರನ್ನು ಪೊಲೀಸರು ತಕ್ಷಣ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ.

ಹಿಂದೂ ದೇವರನ್ನು ಅಪಮಾನ ಮಾಡುವ ಘಟನೆ ನಿರಂತರ ನಡೆಯುತ್ತಿದೆ. ತುಷ್ಟೀಕರಣದ ರಾಜಕೀಯ ಮಾಡುವ  ಕಾಂಗ್ರೆಸ್ ಜನಪ್ರತಿನಿಧಿಗಳು ಪೊಲೀಸ್ ಇಲಾಖೆಯ ಕಾರ್ಯದಲ್ಲಿ ಹಸ್ತಕ್ಷೇಪ ನಡೆಸುವ ಕಾರಣ ಆರೋಪಿಗಳ ಬಂಧನ ನಡೆಯುತ್ತಿಲ್ಲ. ಹಿಂದೂ ಸಂಘಟನೆಗಳ ಯುವಕರನ್ನು ವಿನಾ ಕಾರಣ ಬಂಧಿಸಿ ಕೇಸು ದಾಖಲಿಸುವ ಪೊಲೀಸರು, ಹಿಂದೂಗಳಿಗೆ ಅನ್ಯಾಯವಾದರೆ ಯಾವುದೇ ಕ್ರಮ ವಹಿಸುತ್ತಿಲ್ಲ ಎನ್ನುವ ದೂರು ಸಾರ್ವತ್ರಿಕವಾಗಿದೆ. ಮತಾಂಧರ ರಕ್ಷಣೆಗೆ ನಿಂತಿರುವ ಕಾಂಗ್ರೆಸ್ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸುವುದು ಹಿಂದೂಗಳಿಗೆ ಅನಿವಾರ್ಯವಾಗಲಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.