- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯೋತ್ಸವ ದಿನ ಸಚಿವ ಯು.ಟಿ.ಖಾದರ್ ಕ್ಷೇತ್ರದಲ್ಲಿ ಅಪಚಾರ

rajyothsava [1]ಮಂಗಳೂರು: ಸಚಿವ ಯು.ಟಿ.ಖಾದರ್ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ದಿನ ಅಪಚಾರವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕನ್ನಡ ಭುವನೇಶ್ವರಿ, ರಾಣಿ ಅಬ್ಬಕ್ಕ ಹಾಗೂ ಒನಕೆ ಓಬವ್ವ ವೇಷಧಾರಿಗಳನ್ನು ಉಳ್ಳಾಲ ಪುರಸಭೆ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮೆರವಣಿಗೆ ಮಾಡಿರುವ ಚಿತ್ರ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಚಿತ್ರವನ್ನು ಕಂಡ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೆಂಡಾಮಂಡಲವಾಗಿದ್ದು, ಇದರ ವಿರುದ್ಧ ನಾಳೆ ಉಳ್ಳಾಲ ಪುರಸಭೆ ಮುಂದೆ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಉಳ್ಳಾಲ ಪುರಸಭೆ ಹಾಗೂ ಕೆಲ ಸಂಘಟನೆಗಳು ಇಂಥಹ ವಿಚಾರಗಳ ಬಗ್ಗೆ ಗಮನ ಹರಿಸಬೇಕಿತ್ತು. ಜೊತೆಗೆ ಈ ಅದ್ದೂರಿ ಕಾರ್ಯಕ್ರಮದಲ್ಲಿ ಆಹಾರ ಸಚಿವ ಯು.ಟಿ.ಖಾದರ್ ಕೂಡಾ ಭಾಗವಹಿಸಿದ್ದರು. ಆದರೆ, ಯಾರೂ ಈ ಬಗ್ಗೆ ಗಮನಹರಿಸದಿರುವುದು ಕನ್ನಡ ಭಾಷೆ, ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಅನಿಲ್‌ದಾಸ್ ಪ್ರತಿಕ್ರಿಯಿಸಿದ್ದಾರೆ.