- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Ganja [1]ಮಂಗಳೂರು: ಮಂಜೇಶ್ವರ ಹಾಗೂ ಉಪ್ಪಳದಿಂದ ಗಾಂಜಾ ಸಾಗಿಸಿ ಕೊಣಾಜೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಉದ್ಯಾವರ ಮಾಡದ ಅಬ್ದುಲ್ ಖಾದರ್ ಹಾಗೂ ಅಬ್ದುಲ್ ರೆಹಮಾನ್ ಕಡಂಬಾರ್ ಬಂಧಿತರು. ಅವರಿಂದ 13 ಸಾವಿರ ರೂ. ಮೌಲ್ಯದ 650 ಗ್ರಾಂ ತೂಕದ 9 ಪ್ಯಾಕೆಟ್ ಗಾಂಜಾ, ಮೊಬೈಲ್ ಫೋನ್, ರಿಕ್ಷಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಕೊಣಾಜೆ ಇನ್ಸ್‌ಪೆಕ್ಟರ್ ಅಶೋಕ್ ಪಿಎಸ್‌ಐ ರವಿ ಪವಾರ್, ಎಎಸ್ಐ ಸಂಜೀವ, ಪೇದೆಗಳಾದ ನಾಗರಾಜ್, ಅಶೋಕ್, ಪ್ರದೀಪ್ ಅವರನ್ನೊಳಗೊಂಡ ತಂಡ ನೆತ್ತಿಲಪದವಿನಲ್ಲಿ ವಾಹನ ತಪಾಸಣೆ ಮಾಡುವಾಗ ರಿಕ್ಷಾ ನಿಲ್ಲಿಸದೆ ಆರೋಪಿಗಳು ಪರಾರಿಯಾಗಲೆತ್ನಿಸಿದ್ದಾರೆ.

ಅನುಮಾನಗೊಂಡ ಪೊಲೀಸರು ಅವರನ್ನು ತಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.