‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ

3:25 PM, Friday, December 8th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

serial-actorಬೆಂಗಳೂರು:‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ ನಡೆಸಲಾಗಿದೆ. ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ಕಿರುತೆರೆ ನಟನನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರು ಕಿರುತೆರೆ ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ್ದಕ್ಕೆ ನಟನ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರ

ಈ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪರಿಚಿತ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ದೀಕ್ಷಿತ್ ಶೆಟ್ಟಿ, ನಾನು ರಾತ್ರಿ ಮನೆಗೆ ಹೋಗುತ್ತಿದ್ದಾಗ ಕಾರು ಅಡ್ಡಗಟ್ಟಿ ಸೆಲ್ಫಿ ಕೇಳಿದರು. ಆದರೆ ಮಧ್ಯರಾತ್ರಿಯಲ್ಲಿ ಕುಡಿದವರ ಬಳಿ ಸುಮ್ಮನೆ ಯಾಕೆ ತೊಂದರೆಯಾಗಬಹುದು ಎಂದು ಮುಂದೆ ಹೋದೆ. ಈ ವೇಳೆ ಮೂವರೂ ನನ್ನನ್ನು ಹಿಂಬಾಲಿಸಿ ಹಲ್ಲೆ ನಡೆಸಲು ಯತ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಆ ನಂತರ ನನ್ನ ಕಾರಿನ ಗಾಜುಗಳನ್ನೂ ಒಡೆದುಹಾಕಿದ್ದಾರೆ. ಆ ಮೂವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English