- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶರತ್‌ ಹತ್ಯೆ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರಿಗೆ ಬಹುಮಾನ

sharath-madiwal [1]ಬಂಟ್ವಾಳ: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಹತ್ಯಾ ಪ್ರಕರಣವನ್ನು ಭೇದಿಸಿದ ವಿಶೇಷ ಪೊಲೀಸ್‌ ತಂಡಕ್ಕೆ 2.80 ಲಕ್ಷ ರೂ. ನಗದು ಬಹುಮಾನವನ್ನು ರಾಜ್ಯ ಪೊಲೀಸ್‌ ಡಿಜಿ ನೀಲಮಣಿ ಘೋಷಿಸಿದ್ದಾರೆ.

ದ.ಕ. ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್‌ಪೆಕ್ಟರ್‌ ಅಮನುಲ್ಲಾ, ಸಿಸಿಬಿ ಇನ್ಸ್‌ಪೆಕ್ಟರ್‌ ಸುನಿಲ್‌ ಕುಮಾರ್‌ ಸಹಿತ ಒಟ್ಟು ನಾಲ್ವರು ಇನ್ಸ್‌ಪೆಕ್ಟರ್‌ಗಳು, ಸಬ್‌ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಸೇರಿ 54 ಮಂದಿಗೆ ಈ ನಗದು ಬಹುಮಾನ ಹಂಚಿಕೆ ಮಾಡಲಾಗಿದೆ.

ಶರತ್‌ ಮಡಿವಾಳ ಹತ್ಯಾ ಪ್ರಕರಣವನ್ನು ಭೇದಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಈ ನಗದು ಬಹುಮಾನ ಘೋಷಿಸಲಾಗಿದೆ ಎಂದು ಡಿಜಿ ನೀಲಮಣಿ ಅವರ ಪ್ರಕಟಣೆ ತಿಳಿಸಿದೆ