[1]ಬಂಟ್ವಾಳ: ಬಿ.ಸಿ.ರೊಡಿನ ರೈಲು ನಿಲ್ದಾಣದ ಬಳಿ ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಸಾಮನ್ನಪ್ಪಿದ ಘಟನೆ ಇಂದು ಬೆಳಗ್ಗೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವಕನಿಗೆ ಸುಮಾರು ೨೫ ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಈತ ರಾತ್ರಿ ವೇಳೆಯಲ್ಲಿ ಗೂಡ್ಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರಬೇಕು ಎಂದು ಶಂಕಿಸಲಾಗಿದೆ.
ಇಂದು ಬೆಳಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದು, ಮಂಗಳೂರು ವಿಭಾಗದ ರೈಲ್ವೆ ಪೊಲೀಸ್ ಇನ್ ಸ್ಪೆಕ್ಟರ್ ಜಯಾನಂದ ಕೆ. ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಯುವಕನ ಜೇಬಿನಲ್ಲಿ ಕಾರ್ಕಳ ಎಡಪದವು ವಿಳಾಸದ ಕೆಲವು ವಿಸಿಟಿಂಗ್ ಕಾರ್ಡ್ ಗಳು ದೊರೆತಿದೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.