[1]ಮಂಗಳೂರು: ನೈತಿಕ ಪೊಲೀಸ್ಗಿರಿ ಎನ್ನಲಾದ ಪ್ರಕರಣವೊಂದು ಇಲ್ಲಿನ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದ ಬಳಿ ನಡೆದಿದೆ. ಯುವತಿಯೊಂದಿಗೆ ಇದ್ದ ಅನ್ಯಕೋಮಿನ ಯುವಕನ ಮೇಲೆ ಮತ್ತೊಂದು ಅನ್ಯಕೋಮಿನ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಸ್ ನಿಲ್ದಾಣದ ಬಳಿ ಯುವತಿಯೊಂದಿಗೆ ಅನ್ಯಕೋಮಿನ ಯುವಕ ಸಲುಗೆಯಿಂದ ವರ್ತಿಸುತ್ತಿದ್ದ ಎಂದು ಹೇಳಲಾಗಿದ್ದು, ಇದನ್ನು ಗಮನಿಸಿ ಮತ್ತೊಂದು ಅನ್ಯಕೋಮಿನವರು ಏಕಾಏಕಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕನಿಗೆ ಹಲ್ಲೆಯಾಗುತ್ತಿದ್ದಂತೆ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ.
ಯುವಕನನ್ನು ವಶಕ್ಕೆ ಪಡೆದ ಅನ್ಯಕೋಮಿನ ಕಾರ್ಯಕರ್ತರು ಯುವಕನಿಗೆ ಎಚ್ಚರಿಕೆ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕ ಹಾಗೂ ಯುವತಿ ನಗರದ ಮಾಲ್ವೊಂದರಲ್ಲಿ ಉದ್ಯೋಗದಲ್ಲಿದ್ದು ಪರಿಚಿತರು ಎನ್ನಲಾಗಿದೆ.