- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಶ್ರಫ್, ಶರತ್ ಕುಟುಂಬಕ್ಕೆ ತಲಾ 5 ಲಕ್ಷ ರೂ

u-t-kader [1]ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ಕೆಲವು ತಿಂಗಳ ಹಿಂದೆ ಕೊಲೆಯಾಗಿರುವ ಮುಹಮ್ಮದ್ ಅಶ್ರಫ್ ಮತ್ತು ಶರತ್ ಮಡಿವಾಳ ಕುಟುಂಬಕ್ಕೆ ರಾಜ್ಯ ಸರಕಾರ ತಲಾ ಐದು ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದೆ ಎಂದು ಆಹಾರ ಮತ್ತು ನಾಗರಿಕ‌ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದರು.

ಪರಿಹಾರದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮೂಲಕ ಎರಡೂ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಬಂಟ್ವಾಳದಲ್ಲಿ ಇಬ್ಬರು ಅಮಾಯಕರ ಹತ್ಯೆ ನಡೆದಾಗ ಪರಿಹಾರ ಕೊಡಿಸುತ್ತೇನೆ ಎಂದು ಹೇಳಿದ್ದೆ. ಸರಕಾರದ ಜತೆ ಮಾತುಕತೆ ನಡೆಸಿ, ಪರಿಹಾರ ಬಿಡುಗಡೆಗೊಳಿಸಿ, ಕೊಟ್ಟ ಮಾತು ಉಳಿಸಿದ್ದೇನೆ ಎಂದು ಖಾದರ್ ಹೇಳಿದರು.