ಮಧ್ಯರಾತ್ರಿ ಕಾರಿನ ಟಯರ್ ಪಂಕ್ಚರ್: ಸಂಕಷ್ಟದಲ್ಲಿದ್ದ ಪ್ರವಾಸಿಗರಿಗೆ ನೆರವಾದ ಅಣ್ಣಾಮಲೈ

12:02 PM, Monday, December 25th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

annamalaiಚಿಕ್ಕಮಗಳೂರು: ರಾತ್ರಿ ರಸ್ತೆ ಮಧ್ಯೆ ಕಾರಿನ ಟಯರ್ ಪಂಕ್ಚರ್ ಆಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸಿಗರಿಗೆ ನೆರವಾಗುವ ಮೂಲಕ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಘಟನೆ ನಿನ್ನೆ ರಾತ್ರಿ ನಡೆದಿದ್ದು, ಬೆಂಗಳೂರಿನ ಪ್ರವಾಸಿಗರಿದ್ದ ಕಾರೊಂದು ಚಿಕ್ಕಮಗಳೂರು-ಶೃಂಗೇರಿ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಮತ್ತಾವರ ಎಂಬ ಗ್ರಾಮವನ್ನು ತಲುಪಿದಾಗ ಕಾರಿನ ಟಯರ್ ಪಂಕ್ಚರ್ ಆಗಿತ್ತು.

ಜನಸಂಖ್ಯೆ ವಿರಳವಾಗಿದ್ದ, ಸುತ್ತಮುತ್ತ ಮರಗಳೇ ಅಧಿಕವಾಗಿದ್ದ ಈ ಪ್ರದೇಶದಲ್ಲಿ ಪ್ರವಾಸಿಗರು ತುಂಬಾ ಆತಂಕಕ್ಕೆ ಒಳಗಾಗಿದ್ದರು. ಅಷ್ಟರಲ್ಲಿ ಆ ದಾರಿಯಾಗಿ ಕೊಪ್ಪದಿಂದ ಚಿಕ್ಕಮಗಳೂರಿಗೆ ಎಸ್ಪಿಅಣ್ಣಾಮಲೈ ಆಗಮಿಸಿದ್ದಾರೆ. ಪ್ರವಾಸಿಗರ ಸಮಸ್ಯೆ ಅರಿತ ಅವರು ತಾವೇ ಸ್ವತಃ ಸಹಾಯಕ್ಕಿಳಿದರು. ಸ್ಪಾನರ್ ಹಿಡಿದು ಪಂಕ್ಚರ್ ಆಗಿರುವ ಕಾರಿನ ಟಯರ್ ಅನ್ನು ಬಿಚ್ಚಲು ಯತ್ನಿಸಿದರು.

ಅದು ಸಾಧ್ಯವಾಗದಾಗ ಪ್ರವಾಸಿಗರನ್ನು ತಮ್ಮ ಕಾರಿನಲ್ಲೇ ನಗರಕ್ಕೆ ತಂದು ಬಿಟ್ಟರು. ಎಸ್ಪಿ ಅಣ್ಣಾಮಲೈಯವರ ಈ ದೊಡ್ಡತನಕ್ಕೆ ಬೆಂಗಳೂರಿನ ಪ್ರವಾಸಿಗರು ತುಂಬಾ ಖುಷಿಯಾದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English