ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಿದ್ಧ: ರಮಾನಾಥ ರೈ

10:51 AM, Monday, January 1st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ramanathಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಅವಹೇಳನ ಮಾಡಲಾಗಿದೆ ಎಂಬ ವಿಚಾರದ ಬಗ್ಗೆ ಅರಣ್ಯ ಸಚಿವ ಬಿ. ರಮಾನಾಥ ರೈ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಮಾನಾಥ್‌ ರೈ, ನಾನು ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ. ರಾಜಕೀಯ ಕಾರಣಕ್ಕೆ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ. ಈ ಬಗ್ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಹ ಸಿದ್ಧ ಎಂದಿದ್ದಾರೆ.

ಈ ಬಗ್ಗೆ ಪೂಜಾರಿಯವರಿಗೂ ವೈಯಕ್ತಿಕವಾಗಿ ಹೇಳಿದ್ದೇನೆ. ಅವರು ಹಿರಿಯರು, ಅವರ ಮೇಲೆ ನನಗೆ ಅಪಾರ ಗೌರವ ಇದೆ. ಬಿಜೆಪಿಯಲ್ಲಿ ಉತ್ತಮ ಸ್ಥಾನ ಗಿಟ್ಟಿಸಿಕೊಳ್ಳಲು ಹರಿಕೃಷ್ಣ ಬಂಟ್ವಾಳ ಈ ರೀತಿಯ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English