ಮಂಗಳೂರು ವಿದ್ಯಾರ್ಥಿನಿ ನಾಪತ್ತೆ… ಲವ್‌ ಜಿಹಾದ್‌ ಶಂಕೆ

10:16 AM, Tuesday, January 2nd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

SDM-collegeಮಂಗಳೂರು: ಇತ್ತೀಚಿಗಷ್ಟೆ ಮದುವೆ ಮನೆಯಿಂದ ಪರಾರಿಯಾದ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಲವ್‌ ಜಿಹಾದ್ ಪ್ರಕರಣ ನಡೆದಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಕಳೆದ 5 ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಈಕೆ ಇಕ್ಬಾಲ್ ಎಂಬಾತನೊಂದಿಗೆ ಮುಂಬೈಗೆ ತೆರಳಿರಬಹುದು ಎಂದು ಆಕೆಯ ಪಾಲಕರು ಶಂಕಿಸಿದ್ದಾರೆ.

ಕಾಸರಗೋಡಿನ ಹಿಂದು ಸಂಘಟನೆಯ ಮುಖಂಡರೊಬ್ಬರ ಪುತ್ರಿ ಮಂಗಳೂರಿನಲ್ಲಿ ಕಾನೂನು ಪದವಿ ಓದುತ್ತಿದ್ದು, ಐದು ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಈಕೆಗೆ ಮೂರು ವರ್ಷಗಳ ಹಿಂದೆ ಫೇಸ್‌ಬುಕ್ ಮೂಲಕ ಮುಂಬೈನ ಮನ್ಖದರ್‌ ಎಂಬಲ್ಲಿನ ಇಕ್ಬಾಲ್ ಚೌಧರಿ ಎಂಬಾತನ ಪರಿಚಯವಾಗಿದೆ.

ಆದರೆ, ಈಕೆ ಐದು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಈಕೆಯನ್ನು ಇಕ್ಬಾಲನೇ ಪುಸಲಾಯಿಸಿ ಮುಂಬೈಗೆ ಕರೆದೊಯ್ದಿರಬೇಕೆಂದು ಆಕೆಯ ಹೆತ್ತವರು ಆರೋಪಿಸಿದ್ದಾರೆ.

ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು, ಈ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮೂರು ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಬಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಮನವಿ ನೀಡಿದ್ದು, ಈ ಮನವಿಯಲ್ಲಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣವನ್ನು ಉಲ್ಲೇಖಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English