ಫೇಸ್‌ಬುಕ್ ಮೂಲಕ ಹಿಂದೂ ಯುವತಿಯರಿಗೆ ಎಚ್ಚರಿಕೆ ನೀಡಿದ `ವೀರ ಕೇಸರಿ’

11:57 AM, Thursday, January 4th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Veera-kesariಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಮಂಗಳವಾರ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಇದರಲ್ಲಿ ಹಿಂದೂ ಯುವತಿಯರಿಗೆ ಎಚ್ಚರಿಕೆ ರವಾನಿಸಲಾಗಿದೆ.

ವೀರ ಕೇಸರಿ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಅನ್ಯಕೋವಿನ ವಿದ್ಯಾರ್ಥಿಗಳೊಂದಿಗೆ ಸುತ್ತಾಡುವ ಹಿಂದೂ ಯುವತಿಯರಿಗೆ ಕಪಾಳ ಮೋಕ್ಷ ಖಂಡಿತ ಎಂಬ ಎಚ್ಚರಿಕೆ ನೀಡಲಾಗಿದೆ.

ಬುದ್ಧಿ ಮಾತು ಹೇಳಿದ್ದಾಯಿತು, ಮನವರಿಕೆ ಮಾಡಿದ್ದಾಯಿತು, ಎಚ್ಚರಿಕೆ ಕೊಟ್ಟಿದ್ದಾಯಿತು. ಇನ್ನೇನಿದ್ದರೂ ಕಪಾಳಕ್ಕೆ ಬಾರಿಸುವುದೊಂದೇ ದಾರಿ ಎಂದು ಎಚ್ಚರಿಕೆ ನೀಡಲಾಗಿದೆ.

ಮೂಡಬಿದ್ರೆಯ ಆಸುಪಾಸಿನ ಎಲ್ಲಾ ಹುಡುಗರಿಗೆ ಕೊನೆಯ ಎಚ್ಚರಿಕೆ ಎಂದು ಫೇಸ್‌ಬುಕ್ ಖಾತೆಯಲ್ಲಿ ಹೇಳಲಾಗಿದ್ದು, ಕಾಲೇಜಿನಲ್ಲಿ ತಮ್ಮ ಸಹಪಾಠಿ ಎಂಬ ಸಲುಗೆಯಿಂದ ಅನ್ಯ ಧರ್ಮದ ಯುವಕರೊಂದಿಗೆ ಸಲುಗೆಯಿಂದಿರುವುದು ಕಂಡು ಬಂದರೆ ಹಿಂದೂ ವಿದ್ಯಾರ್ಥಿನಿಯರಿಗೆ ಧರ್ಮದೇಟು ಗ್ಯಾರಂಟಿ ಎಂದು ಎಚ್ಚರಿಸಲಾಗಿದೆ.

ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುವ ಬಹಿರಂಗವಾಗಿ ಎಚ್ಚರಿಕೆ ನೀಡಿರುವ ಬಗ್ಗೆ ಈಗ ಚರ್ಚೆ ಆರಂಭವಾಗಿದ್ದು, ಈ ಫೇಸ್‌ಬುಕ್ ಖಾತೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English