- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮುಸ್ಲಿಂ ವ್ಯಕ್ತಿಯ ಮೇಲೆ ಹಿಂದೂ ಯುವಕರಿಂದ ಹಲ್ಲೆ ಆರೋಪ

hindu-parishath [1]ಉಡುಪಿ: ಹಿಂದೂ ಸಂಘಟನೆಗೆ ಸೇರಿದ ಕೆಲ ಸದಸ್ಯರು ಮುಸ್ಲಿಂ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಕಾರ್ಕಳದ ಬಂಗ್ಲೆಗುಡ್ಡೆ ಸಮೀಪ ಗುರುವಾರ ಸಂಜೆ ಮೊಹಸಿನ್ ಎಂಬುವರ ಮೇಲೆ ಹಿಂದೂ ಸಂಘಟನೆಗಳ ಕೆಲವು ಯುವಕರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ ಗಾಯಗೊಂಡಿರುವ ಮೊಹಸಿನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ದುಷ್ಕರ್ಮಿಗಳು ಬಳಸಿದ ವಾಹನದ ಸಂಖ್ಯೆಯನ್ನು ಗಾಯಾಳು ಮೊಹಸಿನ್ ನೀಡಿದ್ದಾರೆ. ಅದರ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಕ್ರಮ ಕೈಹೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ ಬಜರಂಗದಳ ಸಂಘಟನೆಯ ಮುಖಂಡರೊಬ್ನರಿಗೆ ಸೇರಿದ್ದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.