- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತುಳುಚಲನ ಚಿತ್ರ ನಿರ್ಮಾಪಕರಿಂದ ಮುಖ್ಯಮಂತ್ರಿ ಭೇಟಿ

Tulu-film [1]ಮಂಗಳೂರು : ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಮತ್ತು ನಿರ್ಮಾಪಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ತುಳು ಸಿನಿಮಾರಂಗದಲ್ಲಿನ ಸಮಸ್ಯೆಯನ್ನು ನಿವಾರಿಸುವಂತೆ ಮನವಿ ಮಾಡಿದರು.

ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗದಲ್ಲಿ ತಯಾರಾಗುತ್ತಿರುವ ಎಲ್ಲಾ ತುಳು ಸಿನಿಮಾಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಲಾಯಿತು. ಅಲ್ಲದೆ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಸಮಸ್ಯೆ ಇದೆ. ಚಿತ್ರಮಂದಿರಗಳ ನಿರ್ಮಾಣದ ಜತೆಗೆ ಕಲಾವಿದರಿಗೆ ನೀಡುವ ಮಾಸಾಶನವನ್ನು ೧,೫೦೦ರಿಂದ ೫ ಸಾವಿರ ರೂ ವರೆಗೆ ಏರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Tulu-film-2 [2]ತುಳು ಚಲನ ಚಿತ್ರ ನಿರ್ಮಪಕರ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ನಿರ್ಮಾಪಕರಾದ ದೇವದಾಸ್ ಕಾಪಿಕಾಡ್, ಆರ್ ಧನರಾಜ್, ಸಚಿನ್ ಎ ಎಸ್ ಉಪ್ಪಿನಂಗಡಿ, ಸುದೇಶ್ ಭಂಡಾರಿ, ಗಂಗಾಧರ ಶೆಟ್ಟಿ, ಶರ್ಮಿಳಾ ಕಾಪಿಕಾಡ್, ಪ್ರೀತಂ, ಉದಯಾ ಮೊದಲಾದವರು ಉಪಸ್ಥಿತರಿದ್ದರು.