ಉಡುಪಿ ಜಿಲ್ಲೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

4:26 PM, Monday, January 8th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Baindoorಬೈಂದೂರು: ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಉಡುಪಿಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೈಂದೂರು, ಕಾಪು, ಉಡುಪಿ ಕ್ಷೇತ್ರಗಳಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಸದ್ಯದ ಪರಿಸ್ಥಿತಿಗೆ ಕೋಮುವಾದಿಗಳು‌ ಕಾರಣ. ಇದಕ್ಕೆಲ್ಲ ಸಂಘ ಪರಿವಾರದ ‌ಕುಮ್ಮಕ್ಕು ಅವರು ಬಿಟ್ರೆ ಯಾರೂ ಇಲ್ಲಿ ಗಲಭೆ ಮಾಡಲ್ಲ, ಆದ್ದರಿಂದ ಬಿಜೆಪಿ‌ ಕೋಮುವಾದ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಿಎಫ್ ಐ, ಬಜರಂಗದಳ, ಶ್ರೀ ರಾಮಸೇನೆ ಮೇಲೆ ನಿಗಾ ಇಡಲು ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಅವರು ಈ ಸಂದರ್ಭ ತಿಳಿಸಿದರು.

ನಾವು ಹಿಂದೂ ವಿರೋಧಿ ಎಂದು ಹೇಳಿದವರು ಯಾರು ? ನಮ್ಮನ್ನು ದೂಷಿಸುವವರು ಹಿಂದೂಗಳೂ ಅಲ್ಲ, ಮನುಷ್ಯರೂ ಅಲ್ಲ, ಅವರಿಗೆ ಮನುಷ್ಯತ್ವ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್, ಸಚಿವ ಯು.ಟಿ. ಖಾದರ್ ಹಾಗೂ ಇತರರು ಸ್ವಾಗತಿಸಿದರು. ಬಳಿಕ ಅವರು ಬೈಂದೂರಿನಲ್ಲಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English