ಜಲೀಲ್ ಕರೋಪಾಡಿ ಕುಟುಂಬಕ್ಕೆ ಸಚಿವ ರೈಯಿಂದ 10 ಲಕ್ಷ ರೂ. ಪರಿಹಾರ

5:31 PM, Monday, January 15th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ramanath-raiಬಂಟ್ವಾಳ: 2017ರ ಮೇ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕುಟುಂಬಕ್ಕೆ ಉಸ್ತುವಾರಿ ಸಚಿವ ಬಿ. ರಮಾನಾಥ ರೈ 10 ಲಕ್ಷ ರೂ.ಗಳ ಪರಿಹಾರ ನೀಡಿದ್ದಾರೆ.

ಜಲೀಲ್ ಕರೋಪಾಡಿ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಖುದ್ದಾಗಿ 10 ಲಕ್ಷ ರೂ.ಗಳ ಚೆಕ್‌‌ನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

ಜಲೀಲ್ ತಂದೆ ಉಸ್ಮಾನ್ ಕರೋಪಾಡಿ ಅವರು ಸಚಿವರಿಂದ ಪರಿಹಾರದ ಚೆಕ್‌‌ನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮಹಮ್ಮದ್ ಹಾಗೂ ಇತರ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English