ಉಳಾಯಿಬೆಟ್ಟು ಗಲಭೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಮನ್ಸ್‌

5:08 PM, Thursday, January 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

rajashekarananda-swamiಮಂಗಳೂರು: ಉಳಾಯಿಬೆಟ್ಟು ಗಲಭೆ ಪ್ರಕರಣದ ಸಂಬಂಧ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರಿಗೆ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಸಮನ್ಸ್ ಹೊರಡಿಸಿದೆ.

ಡಿಸೆಂಬರ್ 14, 2014 ರಂದು ಉಳಾಯಿಬೆಟ್ಟುವಿನಲ್ಲಿ ದತ್ತಮಾಲಾಧಿಕಾರಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಗಲಭೆಯೂ ಸಂಭವಿಸಿತ್ತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸ್ವಾಮೀಜಿಯವರಿಗೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English