ಅಮಿತ್ ಶಾ ಭಯದಿಂದ ಬಂದ್‌‌ ಬದಲಾವಣೆ ಮಾಡುತ್ತಿದೆ

10:00 AM, Wednesday, January 24th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

shobha-karandlajeಮಂಗಳೂರು: ಜ.25ರಂದು ಯಡಿಯೂರಪ್ಪ ನೇತೃತ್ವದ ಪರಿವರ್ತನಾ ಸಮಾವೇಶವು ಮೈಸೂರಿನಲ್ಲಿ ಸಮಾಪನಗೊಳ್ಳಲಿದೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರ ಭಯಬಿದ್ದು ಜ.27ರಂದು ನಿಗದಿಯಾಗಿದ್ದ ಬಂದ್‌ ಅನ್ನು 25ಕ್ಕೆ ವಿವಿಧ ಸಂಘಟನೆಗಳ ಮೂಲಕ ಮಾಡಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿಯೇ ರಾಜ್ಯದ ಕಾಂಗ್ರೆಸ್‌ ಸರ್ಕಾರ ದರೋಡೆ, ದೌರ್ಜನ್ಯದಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದು ಕಾಂಗ್ರೆಸ್ ದುರಾಡಳಿತಕ್ಕೆ ಸಾಕ್ಷಿ. ಬೇರೆ ಬೇರೆ ರಾಜ್ಯದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಅನುಸರಿಸಿದ ಚುನಾವಣಾ ಸೂತ್ರವನ್ನು ರಾಜ್ಯದಲ್ಲಿ ಅಳವಡಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾಂಗ್ರೆಸ್ ದುರಾಡಳಿತದಿಂದ ಜನತೆ ಬೇಸತ್ತಿದ್ದು, ಈ ಬಾರಿ ಜಿಲ್ಲೆಯ 8 ಸ್ಥಾನವನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದರು.

ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಅವರನ್ನು ವರ್ಗಾವಣೆ ಮಾಡಲಾಗುತ್ತಿದೆ. ಕಾಂಗ್ರೆಸ್‌ನ 5 ವರ್ಷದಲ್ಲಿ ಜಿಲ್ಲೆಯಲ್ಲಿ ಪ್ರತಿ 6 ತಿಂಗಳಿಗೊಮ್ಮೆ ಎಸ್ಪಿಗಳು ವರ್ಗಾವಣೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಬಿಜೆಪಿ ಅವಧಿಯಲ್ಲಿ ಕೋಮುಗಲಭೆ ಇರಲಿಲ್ಲ. ಈಗ ಕೊಲೆ, ಅನೀತಿ, ಮರಳು ಮಾಫಿಯಾ ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English