ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

10:49 AM, Wednesday, January 31st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

srinivas-shettyಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಮ್ಮ ಶಾಸಕ ಸ್ಥಾನಕ್ಕೆ ನಿನ್ನೆ(ಜ.30) ರಾಜೀನಾಮೆ ನೀಡಿದ್ದಾರೆ. ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಅವರು ಮತ್ತೆ ಸೇರಪಡೆಯಾಗಲಿರುವ ಹಿನ್ನೆಲೆಯಲ್ಲಿ ಅವಧಿ ಮುಗಿಯುವ ಮುನ್ನವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕುಂದಾಪುರ ಚುನಾವಣಾ ಅಖಾಡದಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಯುದ್ಧ 2013 ರ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕುಂದಾಪುರ ಕ್ಷೇತ್ರದಿಂದ ಚುನಾವಣೆಗೆ ನಿಂತು ಅವರು ಗೆಲುವು ಸಾಧಿಸಿದ್ದರು.

ಫೆ.4 ರಂದು ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಅವರ ಸಮ್ಮುಖದಲ್ಲೇ ಹಾಲಾಡಿಯವರು ಬಿಜೆಪಿಗೆ ಸೇರಲಿರುವುದು ಬಹುತೇಕ ಖಚಿತವಾಗಿದೆ.

ಕುಂದಾಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಕುಂದಾಪುರಕ್ಕೆ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರೇ ಎಂದು ವಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೋಷಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English