- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದ ಕಿಡಿಗೇಡಿಗಳು…!

indira-canteen [1]ಮಂಗಳೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದು ವಿರೂಪಗೊಳಿಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ.

ಇಂದಿರಾ ಕ್ಯಾಂಟೀನ್‌‌ ರಾಜ್ಯವ್ಯಾಪಿ ಸ್ಥಾಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲೂ ಕ್ಯಾಂಟೀನ್ ನಿರ್ಮಿಸಲು ಯೋಜಿಸಲಾಗಿದೆ. ಇದರಂತೆ ಸುರತ್ಕಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್‌ಗೆ ಹಾಗೂ ಅಲ್ಲಿದ್ದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ.

ಘಟನೆ ತಡರಾತ್ರಿ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದಾರೆ.