ಕರಂದ್ಲಾಜೆಗೆ ಔತಣಕ್ಕೆ ಕರೆಯಲಿಲ್ಲ ಎಂದು ಬೇಸರ! ಯುಟಿ ಖಾದರ್

3:01 PM, Saturday, February 3rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

karandlajeಮಂಗಳೂರು: ಸಾವಿನ ಮನೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ರಾಜಕೀಯ ತಳುಕು ಹಾಕುವುದು ಯಾಕೆ? ಅನ್ಯಾಯದ ಕೊಲೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಚಿವ ಯುಟಿ ಖಾದರ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಸಂತೋಷ್ ಪೋಷಕರಿಗಾದ ಅನ್ಯಾಯದ ಬಗ್ಗೆ ನಮಗೂ ನೋವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗಿ ಚಾ ಕುಡಿದು ಬರುತ್ತಾರೆ. ಸಿಎಂ ನಮ್ಮ ಮನೆಗೆ ಬಂದಿದ್ದನ್ನು ದೊಡ್ಡ ವಿಷಯವನ್ನಾಗಿ ಮಾಡ್ತಾರೆ. ಶೋಭಾ ಕರಂದ್ಲಾಜೆಗೆ ಔತಣಕ್ಕೆ ಕರೆಯಲಿಲ್ಲ ಎಂದು ಬೇಸರವಾಗಿರಬೇಕು ಎಂದು ಖಾದರ್ ವ್ಯಂಗ್ಯವಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English