ಉಗ್ರ ಬಿನ್‌ ಲಾಡೆನ್‌ ಉತ್ಸವ ಆಚರಿಸಲಿ: ಸಂಸದ ನಳಿನ್‌

10:22 AM, Friday, February 16th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

nalin-kumarಮಂಗಳೂರು: ಬಹಮನಿ ಉತ್ಸವ ಆಚರಿಸಲು ಮುಂದಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಯೋತ್ಪಾದಕ ಒಸಮಾ ಬಿನ್ ಲಾಡೆನ್ ಉತ್ಸವ ಆಚರಿಸಲಿ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಹಿರಿಮೆಯಾಗಿದ್ದ ವಿಜಯನಗರ ಸಾಮ್ರಾಜ್ಯದ ಮೇಲೆ ದಂಡೆತ್ತಿ ಬಂದ ದಂಗೆಕೋರ ಬಹಮನಿ ಸುಲ್ತಾನರು, ಶ್ರೀಮಂತ ವಿಜಯನಗರ ಸಾಮ್ರಾಜ್ಯವನ್ನು ಹಾಳು ಹಂಪೆ ಮಾಡಿದ್ದರು. ಈ ಕರಾಳ ಘಟನೆಯ ಅರಿವಿದ್ದರೂ ಅಲ್ಪಸಂಖ್ಯಾತರ ಓಲೈಕೆಗೆ ಯಾವ ರೀತಿಯಲ್ಲಿ ಬೇಕಾದರೂ ನಡೆದುಕೊಳ್ಳುವ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಹಿಂದೂ ಕಾರ್ಯಕರ್ತರ ಹತ್ಯಾ ಸರಣಿ ನಡೆದಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಪಾಪ ಕೃತ್ಯಗಳನ್ನು ಯಾರೂ ಕ್ಷಮಿಸಲಾರರು. ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಇಲ್ಲಿ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಮೃದು ಹಿಂದುತ್ವದ ನಾಟಕವಾಡುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಪರಿವರ್ತನೆಯಾಗಿ ಈಗ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆಯೇ ಅಥವಾ ಕ್ರೈಸ್ತ ಧರ್ಮದಲ್ಲಿಯೇ ಮುಂದುವರಿಯುತ್ತಿದ್ದಾರೆಯೇ ಎಂಬುದನ್ನು ರಾಹುಲ್ ಗಾಂಧಿ ಜನರಿಗೆ ತಿಳಿಸಬೇಕಾಗಿದೆ. ಹಿಂದೂ ವಿರೋಧಿ ಆಡಳಿತದ ಕಾಂಗ್ರೆಸ್ ಸರ್ಕಾರವಿರುವ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಹಿಂದೂ ದೇವಾಲಯಗಳಿಗೆ ಭೇಟಿ ನೀಡುವ ಮರ್ಮವೇನು ಎಂದು ಬಹಿರಂಗಗೊಳ್ಳಬೇಕು ಎಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English