- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುಡುಪು ಕ್ಷೇತ್ರಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಭೇಟಿ

gurukiran [1]ಮಂಗಳೂರು : ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ನಿನ್ನೆ ಶ್ರೀ ಕ್ಷೇತ್ರದಲ್ಲಿ ನಡೆದ ಕಲಶಾಭಿಷೇಕ, ತಂಬಿಲ ಹಾಗೂ ವಿಶೇಷ ಮಹಾಪೂಜೆಯಲ್ಲಿ ಖ್ಯಾತ ಚಲನಚಿತ್ರ ನಟ, ಸಂಗೀತ ನಿರ್ದೇಶಕ ಗುರುಕಿರಣ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗುರುಕಿರಣ್ ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಎ. ಸುತಗುಂಡಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮುಕ್ತೇಸರ ಭಾಸ್ಕರ ಕೆ. ಪ್ರಧಾನ ಕಾರ್ಯದರ್ಶಿ ಕೆ. ಸುಜನ್‌ದಾಸ್ ಕುಡುಪು, ಅನುವಂಶಿಕ ಅರ್ಚಕರಾದ ಪಿ. ಅನಂತ ಭಟ್, ವಾಸುದೇವ ರಾವ್ ಕುಡುಪು, ಪುಷ್ಪರಾಜ ಪೂಜಾರಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.