[1]ಕಾಪು: ಟ್ಯಾಂಕರ್ ಒಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ಕಡಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಮೃತರನ್ನು ಕಡಪಾಡಿ ಪೆಟ್ರೋಲ್ ಬಂಕ್ ಬಳಿಯ ನಿವಾಸಿ ತೋಮ ಪುಜಾರಿ ಎಂಬವರ ಪುತ್ರ ಗುರುಪ್ರಸಾದ್ (26) ಎಂದು ತಿಳಿದುಬಂದಿದೆ. ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಎದುರುನಲ್ಲಿ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಅಪಘಾತದ ನಂತರ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.