[1]ಮಂಗಳೂರು: ಬೈಕ್, ಆಟೊ ಟ್ಯಾಕ್ಸಿ ಮತ್ತು ಲಾರಿಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಪ್ಪಳದ ಬಂದ್ಯೋಡು ಸಮೀಪದ ಕುಕ್ಕಾರ್ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕಯ್ಯರ್ ನಿವಾಸ ಅಭಿಲಾಷ್(25) ಎಂದು ಗುರುತಿಸಲಾಗಿದೆ. ಅಭಿಲಾಷ್ ಉಪ್ಪಳದಿಂದ ಬಂದ್ಯೋಡ್ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಆಟೊ ಟ್ಯಾಕ್ಸಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಅಭಿಲಾಷ್ ರಸ್ತೆ ಉರುಳಿದಾಗ ಎದುರಿನಿಂದ ಬರುತ್ತಿದ್ದ ಲಾರಿಯ ಚಕ್ರ ಅವರ ತಲೆಯ ಮೇಲೆ ಸಂಚರಿಸಿದೆಯೆನ್ನಲಾಗಿದೆ. ಇದರಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.