- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊಲೆ ಪ್ರಕರಣದ ಆರೋಪಿಯ ಬಂಧನ

murder [1]ಮಂಗಳೂರು : ಬೊಕ್ಕಪಟ್ಣ ಬೆಂಗ್ರೆಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮನೋಜ್ ಯಾನೆ ಮನು (39) ಎಂದು ಗುರುತಿಸಲಾಗಿದೆ. ಬೊಕ್ಕಪಟ್ಣ ಬೆಂಗ್ರೆಯಲ್ಲಿ ನಡೆದ ಶಿವರಾಜ್ ಕರ್ಕೇರಾ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಶಿವರಾಜ್ ಅವರ ಕೊಲೆಗೆ ಪ್ರೇರಣೆ ಹಾಗೂ ಕುಮ್ಮಕ್ಕು ನೀಡಿ ತಲೆಮರೆಸಿಕೊಂಡಿದ್ದ ಆರೋಪಿ ಗುಡ್ಡೆಕೊಪ್ಪಳ ಮನೋಜ್‌ನನ್ನು ಪಣಂಬೂರು ಪೊಲೀಸರು ಮತ್ತು ಮಂಗಳೂರು ಉತ್ತರ ವಿಭಾಗ ರೌಡಿ ನಿಗ್ರಹ ದಳದ ಸಿಬ್ಬಂದಿಗಳ ತಂಡ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ನಗರದ ಪೊಲೀಸ್ ಆಯುಕ್ತರಾದ ಟಿ.ಆರ್. ಸುರೇಶ್ ಇವರ ನಿರ್ದೇಶನದಂತೆ, ನಗರ ಪೊಲೀಸ್ ಉಪ ಆಯುಕ್ತರುಗಳಾದ ಹನುಮಂತರಾಯ, ಹಾಗೂ ಉಮಾ ಪ್ರಶಾಂತ್ ಇವರ ಮಾರ್ಗದರ್ಶನದಂತೆ, ಮಂಗಳೂರು ಉತ್ತರ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರಾದ ರಾಜೇಂದ್ರ ಡಿ ಎಸ್ ಇವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ರಫೀಕ್.ಕೆ.ಎಮ್.

ಹಾಗೂ ಮಂಗಳೂರು ಉತ್ತರ ವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಪಣಂಬೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಭಾಗವಹಿಸಿದ್ದಾರೆ.