ದ್ವಿಚಕ್ರ ವಾಹನ, ಬಂಗಾರ ಕಳವು: ಆರೋಪಿ ಸೆರೆ

11:29 AM, Saturday, March 3rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

vehicleಮಂಗಳೂರು: ಹಲವು ದ್ವಿಚಕ್ರ ವಾಹನ ಮತ್ತು ಬಂಗಾರ ಕಳವು ಪ್ರಕರಣದ ಆರೋಪಿ ಕಾರ್ಕಳ ತಾಲೂಕಿನ ಇನ್ನಾದ ನಿವಾಸಿ ಪ್ರದೀಪ್ ಮೊಯಿಲಿಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಅಪರಾಧ ವಿಭಾಗದ ಎಸ್‌ಐ ಶಂಕರ್ ನಾಯರಿ, ಸಿಬ್ಬಂದಿಗಳಾದ ರಾಜೇಶ್ ಮತ್ತು ಮಾಧವ ಸ್ವರಾಜ್ಯ ಮೈದಾನ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ತನ್ನ ಬಗ್ಗೆ ಪೊಲೀಸರಿಗೆ ಅಸಮರ್ಪಕ ಉತ್ತರ ನೀಡಿದ್ದನೆನ್ನಲಾಗಿದೆ.

ಅನುಮಾನಗೊಂಡ ಪೊಲೀಸರು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಹೆಚ್ಚಿನ ವಿಚಾರಣೆ ನಡೆಸಿದಾಗ ಈತ ಮಂಗಳೂರು ಪೂರ್ವ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನದಲ್ಲಿ ಪಡುಬಿದ್ರೆಯಿಂದ ಮೂಡುಬಿದಿರೆಗೆ ಕಳ್ಳತನಕ್ಕೆ ಬರುವವನೆಂಬುದು ತಿಳಿದುಬಂತು ಎನ್ನಲಾಗಿದೆ.

ಆರೋಪಿಯಿಂದ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಿದಾಗ 15 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. .

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English