ಉಪೇಂದ್ರ ಬಿಜೆಪಿಗೆ ಬಂದರೆ ಸ್ವಾಗತ: ಅಶೋಕ್‌‌

11:57 AM, Tuesday, March 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

upendraಬೆಂಗಳೂರು: ಕೆಪಿಜೆಪಿ ಬಿಕ್ಕಟ್ಟಿನಲ್ಲಿ ಸಿಲುಕಿರುವ ನಟ ಉಪೇಂದ್ರ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಆರಂಭಗೊಂಡಿದೆ. ಆರ್.ಅಶೋಕ್, ತಾರಾ, ಮಾಳವಿಕಾ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಿ.ವಿ.ಗಣೇಶ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಅಶೋಕ್, ನಟ ಉಪೇಂದ್ರ ಬಿಜೆಪಿಗೆ ಬಂದರೆ ಅವರನ್ನು ಸ್ವಾಗತಿಸುತ್ತೇವೆ. ಆದರೆ ಇದುವರೆಗೆ ಯಾರೂ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರಿಗೆ ಬಿಜೆಪಿ ಬಾಗಿಲು ತೆರೆದಿದೆ ಎಂದು ಪಕ್ಷ ಸೇರುವಂತೆ ಪರೋಕ್ಷವಾಗಿ ಆಹ್ವಾನ ನೀಡಿದರು.

ಚಾಮರಾಜಪೇಟೆಯಲ್ಲಿ ಈಗಾಗಲೇ ಎರಡುಬಾರಿ ಬಿಜೆಪಿ ಗೆದ್ದಿದೆ. ಜಮೀರ್ ಕಾಂಗ್ರೆಸ್‌ನಿಂದ, ಜೆಡಿಎಸ್ ಹಾಗೂ ಎಸ್‌ಟಿಪಿಐ ಒಂದೇ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಾರೆ. ಇದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಈ ಕ್ಷೇತ್ರದಲ್ಲಿ ಮೂವರು ಆಕಾಂಕ್ಷಿಗಳಿದ್ದಾರೆ. ಹೈಕಮಾಂಡ್ ಟಿಕೆಟ್ ಅಂತಿಮಗೊಳಿಸಲಿದೆ. ಇಲ್ಲಿ ಬಿಜೆಪಿಗೆ ಈ ಬಾರಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English