ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ

2:41 PM, Tuesday, March 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

ingrautedಮಂಗಳೂರು: ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ingrauted-2ದಿನಂಪ್ರತಿ 500 ಮಂದಿಗೆ ಊಟ, ತಿಂಡಿ ವಿತರಣೆ ನಡೆಯಲಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ತಿಂಡಿ-ಊಟ ಬೇಕಾದವರು ಕೂಪನ್ ಪಡೆಯಬೇಕು. ಕೇಸರಿ ಬಾತ್, ಖಾರಾ ಬಾತ್, ಇಡ್ಲಿ ಉಪಹಾರದಲ್ಲಿ ಸೇರಿವೆ. ಉಪಹಾರಕ್ಕೆ 5 ರೂ, ಊಟ ತಲಾ 10 ರೂ. ನೆಹರೂ ಮೈದಾನ, ಉರ್ವ, ಕಾವೂರು, ಪಂಪ್ ವೆಲ್ ಮತ್ತು ಸುರತ್ಕಲ್ ಸೇರಿ ಮಂಗಳೂರಿನ 5 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ದೊರೆಯಲಿದೆ.

ingrauted-3ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್, ಸಚಿವ ರಮನಾಥ ರೈ, ಐವನ್ ಡಿಸೋಜ, ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮನಪಾ ಸಚೇತಕ ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English