ನಾನು ಹಿಂದೂ ಭಕ್ತ… ಈದ್‌‌ ಯಾಕೆ ಆಚರಿಸಬೇಕು?: ಯೋಗಿ ಆದಿತ್ಯನಾಥ್‌

1:27 PM, Wednesday, March 7th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

uttar-pradeshಲಕ್ನೋ: ನಾನು ಒಬ್ಬ ಹಿಂದೂ ಭಕ್ತ… ನಮ್ಮ ಧರ್ಮದ ಬಗ್ಗೆ ನನಗೆ ಹೆಮ್ಮೆ ಇದ್ದು, ನಾನು ಈದ್‌ ಹಬ್ಬ ಯಾಕೆ ಆಚರಣೆ ಮಾಡಬೇಕು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಶ್ನಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿರುವ ಯೋಗಿ ಆದಿತ್ಯನಾಥ್‌, “ನಾನು ಹಿಂದೂ ಧರ್ಮದವನಾಗಿದ್ದು, ಹೀಗಾಗಿ ಈದ್‌ ಆಚರಿಸುವುದಿಲ್ಲ. ನನ್ನ ಸ್ವಂತ ಧರ್ಮದಲ್ಲಿ ನಾನು ಹೆಮ್ಮೆ ಪಡುತ್ತೇನೆ… ಇಷ್ಟಕ್ಕೂ ನಾನು ಏಕೆ ಈದ್ ಆಚರಿಸಬೇಕು? ಎಂದಿದ್ದಾರೆ. ಇದೇ ವೇಳೆ ಅವರು ಹೋಳಿ ಉತ್ಸವ ಎಲ್ಲರೂ ಆಚರಣೆ ಮಾಡಬೇಕು ಎಂದಿದ್ದಾರೆ.

ಇನ್ನು ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ 25 ವರ್ಷಗಳಿಂದ ತ್ರಿಪುರಾದಲ್ಲಿ ಆಡಳಿತ ನಡೆಸುತ್ತಿದ್ದ ಎಡಪಕ್ಷಗಳಿಗೆ ಬ್ರೇಕ್‌ ನೀಡಿದ್ದೇವೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English