ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ವರ್ಷಂಪ್ರತಿ ಜರಗುವ ವೈಭವದ ‘ಮಂಗಳೂರು ದಸರಾ’ಕ್ಕೆ ಬುಧವಾರ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಶಾರದೆ ಹಾಗೂ ನವದುರ್ಗೆಯರ ವಿಗ್ರಹ ಪ್ರತಿಷ್ಠೆ ನಡೆಯಿತು.ಉದ್ಯಮಿ ರಮೇಶ್ ಕುಮಾರ್ ಹಾಗೂ ಊರ್ಮಿಳಾ ರಮೇಶ್ ಕುಮಾರ್ ದಂಪತಿ ಪ್ರತಿಷ್ಠಾಪನಾ ದೀಪವನ್ನು ಬೆಳಗಿದರು.
ಶಾರದೆಯ ವಿಗ್ರಹವನ್ನು ಕ್ಷೇತ್ರಕ್ಕೆ ಪ್ರದಕ್ಷಿಣೆ ಮಾಡಿ ನಂತರ ಕ್ಷೇತ್ರದ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಮಧ್ಯಾಹ್ನ 11.35ಕ್ಕೆ ನವದುರ್ಗೆಯರು ಹಾಗೂ ಶಾರದೆಯ ವಿಗ್ರಹವನ್ನು ಸಾಂಪ್ರದಾಯಿಕ ವಿಧಿ ವಿಧಾನಗಳಿಂದ ಪ್ರತಿಷ್ಠಾಪಿಸುವ ಮೂಲಕ ಮುಂದಿನ ಹತ್ತು ದಿನಗಳು ನಡೆಯುವ ನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕ್ಷೇತ್ರ ಇಂದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಪ್ರತೀ ಹಂತದಲ್ಲಿ ಅವರ ಮಾರ್ಗದರ್ಶನ ಕ್ಷೇತ್ರಕ್ಕೆ ದೊರೆಯುತ್ತಿದೆ ಎಂದು ರಮೇಶ್ ಕುಮಾರ್ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು.
Click this button or press Ctrl+G to toggle between Kannada and English