- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

jayanthi [1]ಬೆಂಗಳೂರು: ಅಭಿನಯ ಶಾರದೆ ಎಂದೇ ಹೆಸರಾಗಿರುವ ಹಿರಿಯ ನಟಿ ಜಯಂತಿ ತೀವ್ರ ಅಸ್ವಸ್ಥಗೊಂಡಿದ್ದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿಯನ್ನು ಅವರ ಪುತ್ರ ಕೃಷ್ಣಕುಮಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಬಹಳ ಸೂಕ್ಷವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ. ಸತೀಶ್ ಹೇಳಿಕೆ ನೀಡಿದ್ದಾರೆ. ಜಯಂತಿ ಅವರನ್ನು ವೆಂಟಿಲೇಟರ್‌‌ನಲ್ಲಿ ಇರಿಸಲಾಗಿದ್ದು ಮುಂದಿನ 24 ಗಂಟೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು.

ನಾಳೆ ಬೆಳಗಿನವರೆಗೂ ಅವರ ಆರೋಗ್ಯದ ಬಗ್ಗೆ ಯಾವುದನ್ನೂ ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.