ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂಬರ್‌ 1: ಹೇಳಿಕೆ ನೀಡಿ ಮುಜುಗರಕ್ಕೊಳಗಾದ ಶಾ

1:53 PM, Tuesday, March 27th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

amit-shahದಾವಣಗೆರೆ: ಮಾತನಾಡುವ ಭರದಲ್ಲಿ, ಭ್ರಷ್ಟಾಚಾರದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ನಂಬರ್‌‌ 1 ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುಜುಗರಕ್ಕೊಳಗಾಗಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ದೊಡ್ಡ ಬಾತಿ ಗ್ರಾಮದಲ್ಲಿ ಐದು ರೈತರ ಮನೆಗಳಲ್ಲಿ ಮುಷ್ಠಿ ಅಕ್ಕಿ ಸಂಗ್ರಹಿಸಿ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆ ನೀಡಿ ಮುಜುಗರಕ್ಕೆ ಒಳಗಾಗಿದ್ದಾರೆ. ಸುದ್ದಿಗೋಷ್ಠಿ ವೇಳೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾ ಮಾತಿನ ಭರದಲ್ಲಿ ಈ ರೀತಿ ಹೇಳಿಕೆ ನೀಡಿ ತದನಂತರ ತಿದ್ದಿಕೊಂಡಿದ್ದಾರೆ.

ಇದೇ ವೇಳೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English