- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜೇಶ್ ಪೂಜಾರಿ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

rajesh-poojary [1]ಮಂಗಳೂರು: ಬೆಂಜನಪದವಿನಲ್ಲಿ ಮಾ. 21, 2014ರಂದು ನಡೆದ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ನೈಜ ಆರೋಪಿಗಳು ಯಾರು ಎಂಬುದು ನಿಗೂಢವಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಡಿವೈಎಫ್‌‌‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದ ಕಾರ್ಯಕರ್ತ ರಾಜೇಶ್ ಪೂಜಾರಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ.

ಪೊಲೀಸರು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಅಮಾಯಕರನ್ನು ವಿನಾ ಕಾರಣ ಬಂಧಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಪ್ರಕರಣದಲ್ಲಿ ವಿನಾ ಕಾರಣ ಅಮಾಯಕರನ್ನು ಬಂಧಿಸಿ ಹಿಂಸಿಸಲಾಗಿದೆ ಹಾಗೂ 7 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಗೆ ಸರ್ಕಾರ ಪರಿಹಾರ ನೀಡಬೇಕು. ಹಾಗೂ ಪ್ರಕರಣದ ದಿಕ್ಕು ತಪ್ಪಿಸಿದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂಬುವುದು ನಮ್ಮ ಆಗ್ರಹವಾಗಿದೆ ಎಂದರು..