ರಥಬೀದಿಯಲ್ಲಿ ರಾಮ ಮೂರ್ತಿಯ ಚಿನ್ನದ ಸರ ಕದ್ದ ಕಳ್ಳರು

4:49 PM, Tuesday, October 4th, 2011
Share
1 Star2 Stars3 Stars4 Stars5 Stars
(No Ratings Yet)
Loading...

Rama-Mandira

ಮಂಗಳೂರು: ಮಂಗಳೂರು ರಥಬೀದಿಯ ಟೆಂಪಲ್‌ ಸ್ಕೇರ್ ನಲ್ಲಿರುವ ಶ್ರೀರಾಮ ಮಂದಿರ ದ ಕಿಟಿಕಿಯ ಸರಳುಗಳನ್ನು ಮುರಿದು ಒಳ ನುಗ್ಗಿದ ಕಳ್ಳರು ರಾಮ ಮೂರ್ತಿಯ ಮೇಲಿದ್ದ ಒಂದುವರೆ ಪವನು ತೂಕದ ಬಂಗಾರದ ಸರವನ್ನು ಅಪಹರಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ.

ಚಿನ್ನದ ಸರದ ಬೆಲೆ ಸುಮಾರು 24,500 ರೂ ಎಂದು ಅಂದಾಜಿಸಲಾಗಿದೆ. ಸೋಮವಾರ ಬೆಳಗ್ಗೆ ಮಂದಿರದ ಬಾಗಿಲನ್ನು ತೆರೆದಾಗ ಈ ಪ್ರಕರಣ ಬೆಳಕಿಗೆ ಬಂತು.

ಮೆನೇಜರ್ ಮಂಗಲ್‌ದಾಸ್‌ ಗುಲ್ವಾಡಿ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಬಂದರು ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English