ಮಂಗಳೂರು: ಪ್ರಧಾನಿ ಮೋದಿ ಸತ್ಯಾಗ್ರಹ ಬೆಂಬಲಿಸಿ ಮಂಗಳೂರಿನಲ್ಲೂ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಹಂಪನಕಟ್ಟೆಯ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಎದುರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ಇದೇ ವೇಳೆ ಮಾತನಾಡಿದ ಸಂಸದ ನಳೀನ್, ಪ್ರಧಾನಿ ಕರೆಯಂತೆ ಒಂದು ತಿಂಗಳ ಸಂಬಳ ಬಿಟ್ಟಿದ್ದೇವೆ. ಕಾಂಗ್ರೆಸ್ ಸಂಸದರು ತಾಕತ್ತಿದ್ದರೆ ಸಂಬಳ ಬಿಟ್ಟುಕೊಡಲಿ. ದೇಶದ ತೆರಿಗೆಯ ಹಣ ಪೋಲಾಗಲು ಬಿಡುವುದಿಲ್ಲ ಎಂದರು.
Click this button or press Ctrl+G to toggle between Kannada and English