ಕಾಪು: ಬಿಜೆಪಿ ಮತ್ತು ಜೆಡಿಎಸ್ನ ಉಚ್ಚಿಲ ಭಾಗದ 50ಕ್ಕೂ ಅಧಿಕ ಜಿಲ್ಲಾ ಮತ್ತು ರಾಜ್ಯ ಮುಖಂಡರು ಇತ್ತೀಚೆಗೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ಲತೀಫ್ ದಾವೂದ್ ನೇತೃತ್ವದಲ್ಲಿ ಶಾಬಾನ್ ಉಚ್ಚಿಲ, ಗುರುಪ್ರಸಾದ್ ಭಟ್ ಉಚ್ಚಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರನ್ನು ಶಾಸಕ ವಿನಯ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಪ್ರಚಾರ ಸಮಿತಿಯ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಲೋಕೇಶ್ ಅಂಚನ್, ರಫೀಕ್, ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English