ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶ

7:48 PM, Thursday, October 6th, 2011
Share
1 Star2 Stars3 Stars4 Stars5 Stars
(0 rating, 4 votes)
Loading...

Matturu

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದಲ್ಲಿ 1929 ಆಗಸ್ಟ್ 8ರಂದು ಜನಿಸಿದ್ದ ಕೃಷ್ಣಮೂರ್ತಿ ಅವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕುಮಾರ ಪರ್ವ, ದ್ರೌಪದಿ ಸ್ವಯಂವರ, ಮಹಾಭಾರ ಉದ್ಯೋಗ ಪರ್ವ ಸೇರಿದಂತೆ ಭಾರತೀಯ ಹಬ್ಬಗಳ ಕುರಿತು ನಿರ್ದೇಶನ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಮತ್ತೂರಿನಲ್ಲಿ ರಾಮಕೃಷ್ಣಯ್ಯ ಮತ್ತು ನಂಜಮ್ಮ ದಂಪತಿಯ ಪುತ್ರರಾಗಿ ಜನಿಸಿದ ಮತ್ತೂರು ಕೃಷ್ಣಮೂರ್ತಿ ಅವರು 1965ರಲ್ಲಿ ಮೈಸೂರಿನ ಮಿನರ್ವ ಮಿಲ್ಸ್‌ನಲ್ಲಿ ಸಹಾಯಕ ಟೈಮ್‌ ಆಫೀಸರ್‌ ಆಗಿ ವೃತ್ತಿ ಜೀವನ ಆರಂಭಿಸಿದರು ನಂತರ ಅವರು 1967ರಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು.ಬೆಂಗಳೂರು ಆಕಾಶವಾಣಿ ಕೇಂದ್ರದಲ್ಲಿ ಮಕ್ಕಳ ನಾಟಕ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಭಾರತೀಯ ವಿದ್ಯಾಭವನದ ಬೆಂಗಳೂರು ಕೇಂದ್ರದ ರಿಜಿಸ್ಟ್ರಾರ್‌ ಆಗಿ 1969ರಲ್ಲಿ ಅಧಿಕಾರ ಸ್ವೀಕರಿಸಿದ ಮತ್ತೂರು ಕೃಷ್ಣಮೂರ್ತಿ ಅವರು ಹಲವಾರು ಕಾಲೇಜುಗಳು ಹಾಗೂ ಸಾಂಸ್ಕೃತಿಕ ಸಂಘಗಳಲ್ಲಿ ಉಪನ್ಯಾಸ ನೀಡಿದರು. ಕುಮಾರ ವ್ಯಾಸ ಭಾರತದ ಬಗ್ಗೆ ಉಪನ್ಯಾಸ ನೀಡಿದ್ದಲ್ಲದೇ ಮಹಾತ್ಮ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ರಾಜ್ಯಾದ್ಯಂತ ಉಪನ್ಯಾಸ ಕಾರ್ಯಕ್ರಮ ನೀಡಿದರು. ಭಾರತೀಯ ವಿದ್ಯಾಭವನದ ಲಂಡನ್‌ ಶಾಖೆಯ ಸ್ಥಾಪನೆ ಮಾಡುವ ಮೂಲಕ ಲಂಡನ್‌ನಲ್ಲೂ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಮಹತ್ತರವಾದ ಕೆಲಸವನ್ನು ಮಾಡಿದ್ದಾರೆ.

ವೇಲ್ಸ್‌ ರಾಜಕುಮಾರ, ಬ್ರಿಟನ್‌ನ ಇಬ್ಬರು ಪ್ರಧಾನಿಗಳು ಭಾರತೀಯ ವಿದ್ಯಾಭವನದ ಲಂಡನ್‌ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಮತ್ತೂತು ಕೃಷ್ಣಮೂರ್ತಿ ಅವರು ಹಿಂದೂ ಸಂಸ್ಕೃತಿ ಕುರಿತು ನೀಡಿರುವ 120ಕ್ಕೂ ಹೆಚ್ಚು ಉಪನ್ಯಾಸ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದೆ.

ರಾಜ್ಯ ಸರಕಾರದ ಸಹಯೋಗದಲ್ಲಿ ಮಹಾತ್ಮ ಗಾಂಧಿ ಅವರ ಕೃತಿ ಸಾಹಿತ್ಯ ಮಾಲಿಕೆಯ ನೂರು ಸಂಪುಟಗಳನ್ನು ಪ್ರಕಟಿಸುವ ಯೋಜನೆಯನ್ನು ಭಾರತೀಯ ವಿದ್ಯಾಭವನವು ಹಮ್ಮಿಕೊಂಡಿದ್ದು, ಈ ಪೈಕಿ 10 ಸಂಪುಟಗಳು ಪ್ರಕಟವಾಗಿದ್ದು, ಇದಕ್ಕೆ ಮತ್ತೂರು ಕೃಷ್ಣ ಮೂರ್ತಿ ಅವರ ಪರಿಶ್ರಮವೇ ಕಾರಣ

ಭಾರತೀಯ ವಿದ್ಯಾಭವನ ಲಂಡನ್‌ ಶಾಖೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸುವುದರೊಂದಿಗೆ ಹಲವಾರು ಕೃತಿಗಳನ್ನು ರಚಿಸುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲೂ ಸಾಧನೆ ಮಾಡಿದ ಮತ್ತೂರು ಕೃಷ್ಣ ಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಬಂದಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English