[1]ಮಂಗಳೂರು: ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಹಳೆ ಚಪ್ಪಲಿಗಳನ್ನು ಕೋರಿಯರ್ ಮೂಲಕ ಪಾರ್ಸೆಲ್ ಮಾಡಿದ್ದಾರೆ.
ದಿನೇಶ್ ಗುಂಡೂರಾವ್ಗೆ ಚಪ್ಪಲಿ ಪಾರ್ಸೆಲ್ ಮಾಡಿದ ಬಿಜೆಪಿ ಯುವ ಮೋರ್ಚಾ ವಿನೂತನವಾಗಿ ಪ್ರತಿಭಟನೆ ನಡೆಸಿತು.
ದ.ಕ. ಜಿಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.