ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಆಯ್ಕೆಗೆ ತೀವ್ರ ವಿರೋಧ

9:45 AM, Tuesday, April 17th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

sanjiv-matandurಮಂಗಳೂರು: ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಮಠಂದೂರು ಆಯ್ಕೆಗೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಬಿಜೆಪಿ ಸೋಲು ಖಚಿತ ಅಂತ ಟ್ರೋಲ್ ಫೇಸ್‌ಬುಕ್‌ನಲ್ಲಿ ಟ್ರೋಲ್‌ ಹರಿದಾಡುತ್ತಿದೆ. ಪುತ್ತೂರಿನಲ್ಲಿ ಅಶೋಕ್ ರೈ ಮತ್ತು ಹಿಂದೂ ಮುಖಂಡ ಅರುಣ್ ಪುತ್ತಿಲ ಪರ ಒಲವಿದ್ದು, ಅವರಿಗೆ ಟಿಕೆಟ್ ನೀಡಬೇಕು ಎಂಬುದು ಬಿಜೆಪಿ ಕಾರ್ಯಕರ್ತರ ಆಗ್ರಹವಾಗಿದೆ.

ಕಳೆದ ಬಾರಿ ಸೋಲು ಕಂಡಿದ್ದ ಸಂಜೀವ ಮಠಂದೂರಿಗೆ ಮತ್ತೆ ಟಿಕೆಟ್ ನೀಡಿದ್ದಕ್ಕೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಗಿಟ್ಟಿಸಿರುವ ಸಂಜೀವ ಮಠಂದೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English