[1]ಮಂಗಳೂರು: ಮೂಡಬಿದ್ರೆ ಕ್ಷೇತ್ರದಲ್ಲಿ ಮಿಥುನ್ ರೈಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.
ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈಗೆ ಟಿಕೆಟ್ ನೀಡದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ NSUI ನ ಸುಮಾರು 80 ಸದಸ್ಯರು ಕಾಂಗ್ರೆಸ್ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಮೂಡಬಿದ್ರೆ ಕ್ಷೇತ್ರದಲ್ಲಿ ಅಭಯಚಂದ್ರ ಜೈನ್ಗೆ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಮಿಥುನ್ ರೈ ಬೆಂಬಲಿಗರಲ್ಲಿ ಅಸಮಾಧಾನ ಉಂಟಾಗಿದ್ದು, ಇಂದು ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಲು ಕಾರ್ಯಕರ್ತರು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.