ನಳಿನ್ ಕುಮಾರ್ ಕಟೀಲ್ ನನಗೆ ಸಿಗಬೇಕಿದ್ದ ಟಿಕೆಟ್ ತಪ್ಪಿಸಿದ್ದಾರೆ: ಪಾಲೇಮಾರ್ ಆರೋಪ

2:49 PM, Saturday, April 21st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

palimarಮಂಗಳೂರು: ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಟಿಕೆಟ್ ಕೈತಪ್ಪಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರೇ ಟಿಕೆಟ್ ಭರವಸೆ ನೀಡಿದ್ದರು. ಎರಡು ದಿನಗಳ ಹಿಂದೆ ಯಡಿಯೂರಪ್ಪ ಕಚೇರಿಯಿಂದಲೇ ಗುರುತಿನ ಚೀಟಿಯನ್ನು ಕೇಳಿದ್ದರು. ಟಿಕೆಟ್ ಭರವಸೆಯ ಹಿನ್ನೆಲೆಯಲ್ಲಿ ಎ. 23 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧರಿಸಿದ್ದೆ ಆದರೆ ಅಭ್ಯರ್ಥಿಗಳ ಘೋಷಣೆ ಆಗುವಾಗ ನನ್ನ ಹೆಸರಿಲ್ಲ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ನನಗೆ ಸಿಗಬೇಕಿದ್ದ ಟಿಕೆಟ್ ತಪ್ಪಿಸಿದ್ದಾರೆ. ನಳಿನ್ ಕುಮಾರ್ ಕಟೀಲ್, ಭರತ್ ಶೆಟ್ಟಿ ಪರವಾಗಿ ವಾದಿಸಿ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಸಂಸದರ ಚುನಾವಣೆ ಸಂದರ್ಭದಲ್ಲಿ ಹಣವನ್ನು ಕಳೆದುಕೊಂಡವನು ನಾನು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ ರೀತಿಯಲ್ಲಿ ನನ್ನನ್ನು ಮಾಡಿದ್ದಾರೆ. ಇದು ನಮ್ಮ ದುರಂತ. ಸಂಸದರಿಗೆ ಮಾಡಿದ ಸಹಾಯ, ಪ್ರೋತ್ಸಾಹ ನನಗೆ ಮತ್ತು ಅವರಿಗೆ ಮಾತ್ರ ಗೊತ್ತು. ಆದರೆ ಅವರು ನನಗೆ ದ್ರೋಹ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English