[1]ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಮೇಯರ್ ಕೆ. ಅಶ್ರಫ್ ಅವರಿಗೆ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರು ನಗರದ ನಿವಾಸದಲ್ಲಿ ರವಿವಾರ ಬಿ.ಫಾರಂ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಪಕ್ಷದ ಮುಖಂಡರಾದ ಅಝೀಝ್ ಮಲಾರ್, ಮೋಹನ್ದಾಸ್ ಶೆಟ್ಟಿ, ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕೆ.ಅಶ್ರಫ್ ಅವರು ಎ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರನ್ನು ಅಂದು ಬೆಳಗ್ಗೆ 11 ಗಂಟೆಗೆ ಉಳ್ಳಾಲ ಮಾಸ್ತಿಕಟ್ಟೆಯಿಂದ ಪಕ್ಷದ ಕಾರ್ಯಕರ್ತರ ರ್ಯಾಲಿ ಮೂಲಕ ಕರೆ ತರಲಾಗುವುದು ಎಂದು ಪ್ರಕಟನೆ ತಿಳಿಸಿದೆ..