- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

gopal-pojary [1]ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಕೆ. ಗೋಪಾಲ ಪೂಜಾರಿ ಇಂದು ಬೈಂದೂರು ಚುನಾವಣಾಧಿ ಕಾರಿ ಶ್ರೀನಿವಾಸ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೈಂದೂರು ಸೇಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಗೋಪಾಲ ಪೂಜಾರಿ, ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ತಾಪಂ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅವರು, ಐದು ವರ್ಷದ ಅವಧಿಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಜನ ಗುರುತಿಸಿದ್ದಾರೆ. ಎಲ್ಲ ವರ್ಗದ ಜನರಿಗೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇದನ್ನು ಮೆಚ್ಚಿ ಜನ ಮತ್ತೆ ನನ್ನನ್ನು ಕ್ಷೇತ್ರದ ಶಾಸಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.